ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಕಾರ್ಮಿಕರು ಅಸು ನೀಗಿರುವ ದುರಂತ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಎಂಬಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇವರು ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಊರಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಾಹನ ಪಲ್ಟಿಯಾಗಿದ್ದಕ್ಕೆ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರನ್ನು ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.