2026-03-07 07:13:34

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

ಗಣೇಶ ಪ್ರತಿಷ್ಠಾಪನೆ ಜಾಗದಲ್ಲಿ ಹಾಡುಗಳಿಗೆ ಡ್ಯಾನ್ಸ್ ಮಾಡಿಕೊಂಡು ಸಂಭ್ರಮದಲ್ಲಿ ತೇಲಾಡುತ್ತಿದ್ದ ಯುವಕನಿಗೆ ಸಹೋದರ ಹಾಗೂ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೊಂದು ಯುವಕ (Youth) ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.

ಗಿರೀಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಗಣೇಶೋತ್ಸವದಲ್ಲಿ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದು, ರಾತ್ರಿ 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಆತನ ಸಹೋದರ ಹಾಗೂ ತಾಯಿ ಬಂದು ಮನೆಗೆ ಬಾ ಎಂದು ಬೈದು ಬುದ್ಧಿವಾದ ಹೇಳಿದ್ದಾರೆ. ಈ ಮಾತುಗಳಿಂದ ನೊಂದ ಗಿರೀಶ್ ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.