2026-03-07 12:19:42

Training Aircraft Crashes | ವಿಜಯಪುರ ತರಬೇತಿ ನಿರತ ವಿಮಾನ ಪತನ ಇಬ್ಬರು ಪೈಲಟ್‌ಗಳು ಪಾರು | Speed News Kannada

Training Aircraft Crashes | ವಿಜಯಪುರ ತರಬೇತಿ ನಿರತ ವಿಮಾನ ಪತನ ಇಬ್ಬರು ಪೈಲಟ್‌ಗಳು ಪಾರು | Speed News Kannada

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ತರಬೇತಿ ನಿರತ ವಿಮಾನವೊಂದು ಪತನವಾಗಿದೆ. ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 'ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ 'ರೆಡ್ ಬರ್ಡ್' ಏವಿಯೇಷನ್‌ಗೆ ಸೇರಿದ ಈ ವಿಮಾನವು ಮಂಗಳೂರು ಗ್ರಾಮದ ಹೊಲದಲ್ಲಿ ಪತನವಾಗಿದೆ. ಕ್ಯಾಪ್ಟನ್ ಕುನಾಲ್ ಮತ್ರಾ ಮತ್ತು ತರಬೇತಿ ನಿರತ ಪೈಲಟ್ ಗೌತಮ್ ಶಂಕರ್ ಪಿ.ಆರ್. ವಿಮಾನದಿಂದ ಜಿಗಿದು ಪಾರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. 'ವಿಮಾನವು ತಲೆ ಕೆಳಗಾಗಿ ಮುರಿದು ಬಿದ್ದಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ' ಎಂದು ನಿಂಬರಗಿ ಹೇಳಿದ್ದಾರೆ.
ವಿಮಾನ ಪತನವಾಗಿರುವ ಸ್ಥಳದಲ್ಲಿ ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ನೋಡಲು ಸೇರಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.