ಕನ್ನಡ ಚಲನಚಿತ್ರದ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರವಾದ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಈ ವೇಳೆ ಅವರು ಮಾರಿಯಮ್ಮನ ಸ್ವರ್ಣ ಗದ್ದುಗೆ ಹಾಗೂ ವಿವಿಧ ಕಲಾತ್ಮಕ ಕೆತ್ತನೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಎಲ್ಲ ಕಲಾಕೃತಿಗಳನ್ನು “ಕಾಪುವಿನ ಅಮ್ಮನ ಆಶೀರ್ವಾದದಿಂದ ನಿರ್ಮಿಸಲಾಗಿದೆ” ಎಂದು ಹೇಳಿದರು.ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ನಟ ಶಶಿಕುಮಾರ್ ತಿಳಿಸಿದರು. ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯವರು ಅವರನ್ನು ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.