ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ಕಸ ವಿಚಾರದ ಬಗ್ಗೆ ಮಾತನಾಡುತ್ತಿರುವಾಗ ಈ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ . ಮುನಿರತ್ನ ಕೇಸ್ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಮುನಿರತ್ನ ಹಾಗೂ ಡಿ.ಕೆ.ಶಿವಕುಮಾರ್ ನಡುವೇ ತೀರಾ ವಾಗ್ವಾದ ನಡೆದಿದ್ದು ಡಿ.ಕೆ.ಶಿವಕುಮಾರ್ ನಿನ್ನಂತ ಪುಡಿಗಳಿಗೆ ನಾನು ಹೆದರಲ್ಲ ಎಂದು ಮುನಿರತ್ನಗೆ ತೀರುಗೇಟು ನೀಡಿದ್ದಾರೆ. ಈ ಎಲ್ಲಾ ವಿಷಯಗಳು ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ.