2026-03-07 04:59:47

Water in Kunigal Rambana canal after 15 years | 15 ವರ್ಷದ ನಂತರ ಕುಣಿಗಲ್ ರಾಮಬಾಣ ಹಂತದ ಕಾಲುವೆಗೆ ನೀರು | Speed News Kannada

Water in Kunigal Rambana canal after 15 years | 15 ವರ್ಷದ ನಂತರ ಕುಣಿಗಲ್ ರಾಮಬಾಣ ಹಂತದ ಕಾಲುವೆಗೆ ನೀರು | Speed News Kannada

ಕುಣಿಗಲ್: ಕುಣಿಗಲ್ ದೊಡ್ಡಕೆರೆ ರಾಮಬಾಣ ಹಂತದ ನಾಲೆಯ ತೂಬಿನಲ್ಲಿ ನಿರ್ಮಿಸಿದ್ದ ಕಾಂಕ್ರಿಟ್ ತಡೆಯನ್ನು ಶಾಸಕ ಡಾ.ರಂಗನಾಥ್ ಭಾನುವಾರ ತೆರವುಗೊಳಿಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡಕೆರೆ ವ್ಯಾಪ್ತಿಯ ಲಕ್ಷ್ಮೀದೇವಿ ಹಂತ ಮತ್ತು ರಾಮಬಾಣಹಂತ ಕಾಲುವೆಗಳಿದ್ದು, ಕೆರೆ ನೀರು ತುಂಬಿದ್ದರೂ ನಾಲೆಗಳಲ್ಲಿ ಹರಿಯದ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಗಮನಹರಿಸಿದ್ದು ಮುಳುಗು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ತೂಬಿನ ಪ್ರದೇಶದಲ್ಲಿ ನಾಲೆಗೆ ನೀರು ಹರಿಯದಂತೆ ತೂಬಿನಲ್ಲಿ ಕಾಂಕ್ರಿಟ್ ತಡೆ ನಿರ್ಮಿಸಿರುವುದು ಕಂಡುಬಂದಿದೆ. ವಿಶೇಷ ಕಾರ್ಯಪಡೆ ಮೂಲಕ ನೀರಿನಾಳದಲ್ಲಿರುವ ತೂಬಿನ ಕಾಂಕ್ರಿಟ್ ತಡೆಗೋಡೆ ತೆರವುಗೊಳಿಸಿ ನೀರು ಹರಿಸಲಾಗುತ್ತಿದೆ ಎಂದರು.
ಸದ್ಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಲೆ ದುರಸ್ತಿಗೊಳಿಸಿ ಆದ್ಯತೆ ಮೇರೆಗೆ ಕೃಷಿಗೆ ನೀರು ನೀಡುವ ಬಗ್ಗೆ ಗಮನಹರಿಸಲಾಗುವುದು ಎಂದರು. ಹೇಮಾವತಿ ನಾಲ ವಲಯದ ಎಇಇ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣಗೌಡ ಹಾಜರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.