ಚಿತ್ರದುರ್ಗ: ಮೇ 9ರಂದು ಬೆಳಿಗ್ಗೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ನಡೆಯಲಿರುವುದರಿಂದ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ. ಅಂದು ಬೆಳಗ್ಗೆ ನಡೆಯಬೇಕಿದ್ದ ಕಾರ್ಯಕ್ರಮವು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದ್ದು, 3.45ರವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಪಯಣ ಪೂರೈಸಿದ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದರು.
ಎಲ್ಲ ಜಿಲ್ಲೆಗಳ ಸ್ವಾಮೀಜಿಗಳಿಗೆ ಆಮಂತ್ರಣ ನೀಡಲು ಯೋಜಿಸಿದ್ದೆವು. ಸಮಯದ ಅಭಾವದಿಂದ ಎಲ್ಲರ ಭೇಟಿ ಸಾಧ್ಯವಾಗಿಲ್ಲ. ನಾಡಿನ ಮಠಾಧೀಶರು, ಸ್ವಾಮೀಜಿಗಳು ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿಮಾಡಿಕೊಂಡರು.
ಅಭಿಮಾನಿಗಳಿಗಾಗಿ 10 ಸಾವಿರ ಬಸ್ಗಳನ್ನು ಬುಕಿಂಗ್ ಮಾಡಲಾಗಿದೆ. 45ರಿಂದ 50 ಸಾವಿರ ಕಾರು ಮತ್ತಿತರ ವಾಹನಗಳು ಆಗಮಿಸಲಿವೆ. ನಮ್ಮ ನಿರೀಕ್ಷೆಗೂ ಮೀರಿ ಸ್ಪಂದನೆ ಲಭಿಸುತ್ತಿದೆ ಎಂದು ಹೇಳಿದರು.
2 ಗ್ರಂಥಗಳ ಬಿಡುಗಡೆ- ಗೋವಿಂದ ಕಾರಜೋಳ
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಯಡಿಯೂರಪ್ಪ ಅವರ 50 ವರ್ಷಗಳ ಜೀವನಚರಿತ್ರೆಯನ್ನು ನಾವು ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ಒಂದು ಸಾಂಸ್ಕøತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದೇವೆ. ಅವರ ಜೀವನಚರಿತ್ರೆ ಮತ್ತು ಸದನದಲ್ಲಿ ಯಡಿಯೂರಪ್ಪನವರು ಎಂಬ ಸಂಬಂಧ ‘ಕೆಂದಾವರೆ- ಕಮಲದಲ್ಲಿ ಅರಳಿದ ಹೂ’ ‘ಸದನದಲ್ಲಿ ಶಿಕಾರಿ’ ಎಂಬ 2 ಗ್ರಂಥಗಳನ್ನು ಅವತ್ತು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
8ರಂದು ಸಂಜೆ ಯಡಿಯೂರಪ್ಪನವರ ಪುರಪ್ರವೇಶ ನಡೆಯಲಿದೆ. ಇದನ್ನು ನಾಡಿನ ಸಾಂಸ್ಕøತಿಕ ಹಬ್ಬದ ರೀತಿಯಲ್ಲಿ ಮಾಡಲು ತಯಾರಿ ಮಾಡಿದ್ದೇವೆ. 24 ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾ